ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ kanaka dasaru indu sairisiri srikrishnana tappa

Restart mobile & try if the above audio is not playing

ಶ್ರೀಕನಕದಾಸರ ಕೃತ

ರಾಗ : ಶಂಕರಾಭರಣ   ಆದಿತಾಳ


ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ

ಮುಂದಕೆ ನಿಮ್ಮ ಮನೆಗೆ ಬಾರನಮ್ಮ||


ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆ

ಬಿಗಿಯ ಬಹುದೇ ಶ್ರೀ ಚರಣವನು|

ಅಗಣಿತ ಮಹಿಮನ ಅಂಜಿಸಲೇಕಮ್ಮ

ಬಗೆಯ ಬಾರದೆ ನಿಮ್ಮ ಮಕ್ಕಳಂತೆ ||1||


ಹಸುಮಗುವನು ಕಂಡು ಮುದ್ದಿಸಲೊಲ್ಲದೆ

ಹುಸಿಗ ಕಳ್ಳನೆಂದು ಕಟ್ಟುವಿರಿ|

ವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ 

ನಿಮ್ಮಹಸು ಮಗುವಿನಂತೆ ಭಾವಿಸಬಾರದೆ ||2||


ಎಷ್ಟು ಸಾರಿಯು ನಾ ಬೇಡವೆಂದರೆ ಕೇಳ

ದುಷ್ಟ ಮಕ್ಕಳ ಕೂಡೆ ಒಡನಾಟವ|

ಕಟ್ಟಿದ ನೆಲುವಿನ ಬೆಣ್ಣೆಯನೀವೆನು

ಬಿಟ್ಟು ಕಳುಹಿರಮ್ಮ ಆದಿಕೇಶವನ ||3||

**

Comments