ನಿನಗೆ ಅಂಜುವನಲ್ಲ ನೀರಜಾಕ್ಷ vijaya dasaru


Restart mobile & try if the above audio is not playing


ಶ್ರೀ ಶ್ರೀ ವಿಜಯದಾಸರ ರಚನೆ

ರಾಗ : ಹಿಂದೊಳ     ಖಂಡಛಾಪು


ನಿನಗೆ ಅಂಜುವನಲ್ಲ ನೀರಜಾಕ್ಷ |

ಮನವಚನ ಕಾಯದಿಂ ನಿನ್ನವರಿಗಂಜುವೆನು||


ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು

ಯೋಗ ಮಾರ್ಗದಿ ನಿನ್ನ ಭಜಿಸುತಿರಲು|

ಯೋಗ ಕುಂಭೋದ್ಭವನು ಬಂದು ಶಾಪವ ಕೊಡಲು

ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ ||


ಗುಣವಂತರೀರ್ವರು

ಜಯವಿಜಯರು ನಿನ್ನ

ಅನುಗಾಲ ಬಾಗಿಲನು ಕಾಯುತಿರಲು

ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ|

ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ ||


ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು

ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ

ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ

ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ ||


ಅನಪರಾಧಿಗಳಿಗೆ ಇನಿತಾಯಿತೋ ದೇವ

ಎನಗೆ ತನಗೆಂಬುವರಿಗಾವ ಗತಿಯೊ

ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ•

ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ|| 

**

Comments